ಶೃಂಗೇರಿ, ಎನ್.ಆರ್ ಪುರ ಮತ್ತು ಕೊಪ್ಪ ಭಾಗದ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ "ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ" ರಚನೆಯ ಕುರಿತು ಸಭೆ
S
Sankusha
ಶೃಂಗೇರಿ, ಎನ್.ಆರ್ ಪುರ ಮತ್ತು ಕೊಪ್ಪ ಭಾಗದ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ "ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ" ರಚನೆಯ ಕುರಿತು ಶ್ರೀ ವಿಶ್ವನಾಥ್ ಗದ್ದೆಮನೆ ಅವರ ನಿವಾಸದಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಒಕ್ಕೂಟದ ರಚನೆ ಧ್ಯೇಯ ಮತ್ತು ರೂಪುರೇಷೆಗಳನ್ನು ಕುರಿತು ಚರ್ಚಿಸಲಾಯಿತು.
ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಉದ್ದೇಶಗಳನ್ನು ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಶ್ರೀ ರಾಮಸ್ವಾಮಿ ಶೆಟ್ಟಿಗದ್ದೆ ರವರು, ಇನ್ನಿತರ ಪ್ರಮುಖರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Gallery
S
Sankusha
Author at ರೈತ ಒಕ್ಕೂಟ. Passionate about technology and innovation.